Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:2 - ಕನ್ನಡ ಸತ್ಯವೇದವು C.L. Bible (BSI)

2 ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:2
7 ತಿಳಿವುಗಳ ಹೋಲಿಕೆ  

ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು