Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:3 - ಕನ್ನಡ ಸತ್ಯವೇದವು C.L. Bible (BSI)

3 “ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ಆಲಯದ ಪೂರ್ವವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಾಗಿ ಕಾಣಿಸುತ್ತದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:3
8 ತಿಳಿವುಗಳ ಹೋಲಿಕೆ  

ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದಾವೀದನು ತನ್ನಲ್ಲೇ, “ನನ್ನ ಮಗ ಸೊಲೊಮೋನನು ಎಳೇ ಪ್ರಾಯದವನು. ಸರ್ವೇಶ್ವರನಿಗೆ ಕಟ್ಟಿಸತಕ್ಕ ದೇವಾಲಯವು, ಜಗತ್ತಿನಲ್ಲೆಲ್ಲಾ ಸುಪ್ರಸಿದ್ಧವಾಗಿರಬೇಕು; ಅದು ಅತಿ ಅದ್ಭುತಕರವಾಗಿರಬೇಕು; ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು,” ಎಂದುಕೊಂಡನು. ಸಾಯುವುದಕ್ಕೆ ಮೊದಲೇ ಹಲವಾರು ಸಲಕರಣೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಜ್ಜು ಮಾಡಿದನು.


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು