Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:6 - ಕನ್ನಡ ಸತ್ಯವೇದವು C.L. Bible (BSI)

6 ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:6
24 ತಿಳಿವುಗಳ ಹೋಲಿಕೆ  

ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


“ಅವರು ನಿನ್ನ ವಿಷಯದಲ್ಲಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು; ಕತ್ತಿಗಳಿಂದ ತುಂಡರಿಸುವರು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.


ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.


ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು