Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:17 - ಕನ್ನಡ ಸತ್ಯವೇದವು C.L. Bible (BSI)

17 ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:17
15 ತಿಳಿವುಗಳ ಹೋಲಿಕೆ  

ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II


“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.


ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು