Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:5 - ಕನ್ನಡ ಸತ್ಯವೇದವು C.L. Bible (BSI)

5 ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:5
33 ತಿಳಿವುಗಳ ಹೋಲಿಕೆ  

ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು