Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:15 - ಕನ್ನಡ ಸತ್ಯವೇದವು C.L. Bible (BSI)

15 ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:15
8 ತಿಳಿವುಗಳ ಹೋಲಿಕೆ  

ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು.


ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.


“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು