Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:6 - ಕನ್ನಡ ಸತ್ಯವೇದವು C.L. Bible (BSI)

6 ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:6
22 ತಿಳಿವುಗಳ ಹೋಲಿಕೆ  

“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.


“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ.


ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


“ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು