Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:7 - ಕನ್ನಡ ಸತ್ಯವೇದವು C.L. Bible (BSI)

7 ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಚಕ್ಕೆಗೆ ಸಮಾನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:7
9 ತಿಳಿವುಗಳ ಹೋಲಿಕೆ  

“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು