Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:3 - ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:3
20 ತಿಳಿವುಗಳ ಹೋಲಿಕೆ  

‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.


ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು