Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:5 - ಕನ್ನಡ ಸತ್ಯವೇದವು C.L. Bible (BSI)

5 “ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲು ಐಗುಪ್ತದೇಶಕ್ಕೆ ಹಿಂದಿರುಗದು; ಅದು [ನನ್ನ ಕಡೆಗೆ] ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:5
20 ತಿಳಿವುಗಳ ಹೋಲಿಕೆ  

ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು