Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:7
18 ತಿಳಿವುಗಳ ಹೋಲಿಕೆ  

ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು