Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಐಗುಪ್ತದೇಶದಲ್ಲಿದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ, ನಿನ್ನ ದೇವರಾಗಿರುವ ಯೆಹೋವ ದೇವರಾದ ನಾನು, ಜಾತ್ರೆಯ ದಿನಗಳಲ್ಲಿ ನೀವು ವನವಾಸ ಮಾಡಿದಂತೆ, ನಿಮ್ಮನ್ನು ಪುನಃ ಗುಡಾರದ ವಾಸಕ್ಕೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:9
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,


ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.


ನಿಮ್ಮ ದೇವರಾಗಬೇಕೆಂಬ ಉದ್ದೇಶದಿಂದಲೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಸರ್ವೇಶ್ವರನಾದ ದೇವರು ನಾನು. ನಾನೇ ನಿಮ್ಮ ದೇವರಾದ ಸರ್ವೇಶ್ವರ.‘


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.


ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು