Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:15 - ಕನ್ನಡ ಸತ್ಯವೇದವು C.L. Bible (BSI)

15 ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:15
27 ತಿಳಿವುಗಳ ಹೋಲಿಕೆ  

ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.


ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ಎಫ್ರಯಿಮರ ಮಹಿಮೆ ಪಕ್ಷಿಯಂತೆ ಹಾರಿಹೋಗುವುದು. ಅಲ್ಲಿ ಯಾರೂ ಮಕ್ಕಳನ್ನು ಹೆರುವುದಿಲ್ಲ; ಯಾರೂ ಗರ್ಭಿಣಿಯಾಗುವುದಿಲ್ಲ; ಯಾರೂ ಗರ್ಭ ಧರಿಸುವುದಿಲ್ಲ.


ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ಅವುಗಳ ಹಿಂದೆಯೇ ಮೂಡಣಗಾಳಿಯಿಂದ ಒಣಗಿ, ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ಅವುಗಳ ಹಿಂದೆಯೆ, ಮೂಡಣ ಗಾಳಿಯಿಂದ ಒಣಗಿ, ಬತ್ತಿ, ಕೆಟ್ಟುಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು