Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:6 - ಕನ್ನಡ ಸತ್ಯವೇದವು C.L. Bible (BSI)

6 ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:6
23 ತಿಳಿವುಗಳ ಹೋಲಿಕೆ  

ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು