Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:1
34 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.


ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.


ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.


ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


ಇಸ್ರಯೇಲಿನ ಪ್ರತಿ ಒಬ್ಬ ಪುರುಷನಿಗೂ ಸ್ತ್ರೀಗೂ ಒಂದೊಂದು ರೊಟ್ಟಿಯನ್ನೂ ಬೇಯಿಸಿದ ಒಂದು ತುಂಡುಮಾಂಸವನ್ನೂ ಒಣಗಿದ ದ್ರಾಕ್ಷೆಗಳನ್ನೂ ಹಂಚಿದನು


ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು