Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:1
44 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”


ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.


ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ :


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ : “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


“ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II


"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು