Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:16 - ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:16
19 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.


ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು