Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:6 - ಕನ್ನಡ ಸತ್ಯವೇದವು C.L. Bible (BSI)

6 ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:6
54 ತಿಳಿವುಗಳ ಹೋಲಿಕೆ  

ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಕೇಳಿದಿದ್ದರೆ ಸಾಗರದಲ್ಲಿ ಮುಳುಗಿಹೋಗುವರು ಜ್ಞಾನಹೀನರಾಗಿಯೇ ಪ್ರಾಣ ಕಳೆದುಕೊಳ್ಳುವರು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II


ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.


ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II


ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.


ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು