Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕನು ಹೇಗೋ ಹಾಗೆಯೇ ಜನರು ಇರುವರು. ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:9
23 ತಿಳಿವುಗಳ ಹೋಲಿಕೆ  

ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು