Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:15 - ಕನ್ನಡ ಸತ್ಯವೇದವು C.L. Bible (BSI)

15 “ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:15
51 ತಿಳಿವುಗಳ ಹೋಲಿಕೆ  

ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು