Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:9 - ಕನ್ನಡ ಸತ್ಯವೇದವು C.L. Bible (BSI)

9 ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಡಕಾಯಿತಿಯವರು ಒಬ್ಬನಿಗೆ ಹೊಂಚುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು ಶೆಕೆವಿುಗೆ ಹೋಗುವವರನ್ನು ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:9
23 ತಿಳಿವುಗಳ ಹೋಲಿಕೆ  

“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಮತ್ತೆ ಸರ್ವೇಶ್ವರ ನನಗೆ : “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನೀವು ಮಿಚ್ಪದಲ್ಲಿ ಉರುಲಾಗಿದ್ದೀರಿ. ತಾಬೋರಿನಲ್ಲಿ ಬಲೆಯಾಗಿದ್ದೀರಿ. ಶಿಟ್ಟಿಮಿನಲ್ಲಿ ಆಳವಾದ ಕಂದಕವನ್ನು ತೋಡಿದ್ದೀರಿ. ನಿಮ್ಮ ವಿರುದ್ಧ ತೀರ್ಪುಬಂದಿದೆ. ನಿಮ್ಮೆಲ್ಲರನ್ನು ಶಿಕ್ಷಿಸುವೆನು.


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು