Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:8 - ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡದ ಪಾತ್ರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:8
19 ತಿಳಿವುಗಳ ಹೋಲಿಕೆ  

ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.


ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು