Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:9 - ಕನ್ನಡ ಸತ್ಯವೇದವು C.L. Bible (BSI)

9 ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:9
13 ತಿಳಿವುಗಳ ಹೋಲಿಕೆ  

ಅಡವಿಯಲ್ಲೆ ಪಳಗಿದ, ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿರುವೆ. ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯೂ ಅದನ್ನು ಬದಿಗೊತ್ತುವಂತಿಲ್ಲ ಅದನ್ನು ಹುಡುಕುವವುಗಳೆಲ್ಲ ಆಯಾಸಪಡಬೇಕಾಗಿಲ್ಲ. ಅವಳ ತಿಂಗಳಲ್ಲಿ ಅವಳನ್ನು ಸುಲಭವಾಗಿ ದೊರಕಿಸಿಕೊಳ್ಳುವುವು.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು