Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:13 - ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:13
13 ತಿಳಿವುಗಳ ಹೋಲಿಕೆ  

ಸಮುದ್ರದ್ವಾರದಲ್ಲಿ ವಾಸಿಸುವ ನಗರಿಯೇ, ರಾಷ್ಟ್ರಗಳಿಗೂ ಹಲವಾರು ದ್ವೀಪಗಳಿಗೂ ನಡುವೆ ವ್ಯಾಪಾರ ನಡೆಸುವವಳೇ, ಸರ್ವೇಶ್ವರನಾದ ದೇವರು ಹೇಳುವುದನ್ನು ಕೇಳು: “ಟೈರ್ ನಗರಿಯೇ, ‘ನಾನೋರ್ವ ನಾವೆ,’ ‘ಸರ್ವಾಂಗ ಸುಂದರಿ ನಾನಾಗಿರುವೆ,’ ಎಂದು ಕೊಚ್ಚಿಕೊಂಡೆಯಲ್ಲವೆ?


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು