Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:6 - ಕನ್ನಡ ಸತ್ಯವೇದವು C.L. Bible (BSI)

6 ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:6
32 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.


ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು