Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:8 - ಕನ್ನಡ ಸತ್ಯವೇದವು C.L. Bible (BSI)

8 ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚುಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಯ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿರೋಧವು ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ದೇವರೊಂದಿಗೆ ಪ್ರವಾದಿಯು ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:8
42 ತಿಳಿವುಗಳ ಹೋಲಿಕೆ  

“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.


ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.


ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.


ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.


ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.


ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


“ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು