Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:31 - ಕನ್ನಡ ಸತ್ಯವೇದವು J.V. (BSI)

31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:31
14 ತಿಳಿವುಗಳ ಹೋಲಿಕೆ  

ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!


ರಾಜನಾದ ನೆಬೂಕದ್ನೆಚ್ಚರನಿಗೆ - ಅರಸೇ, ಚಿರಂಜೀವಿಯಾಗಿರು!


ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಕಡೆಯಲ್ಲಿ ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.


ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!


ಹೀಗೆ ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ - ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!


ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.


ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.


ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.


ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.


ದಾವೀದನೂ ಹೊರಗೆ ಬಂದು - ಅರಸನೇ, ನನ್ನ ಒಡೆಯನೇ ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ -


ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು