Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:38 - ಕನ್ನಡ ಸತ್ಯವೇದವು J.V. (BSI)

38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:38
14 ತಿಳಿವುಗಳ ಹೋಲಿಕೆ  

ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.


ದಾವೀದನ ಎಲ್ಲಾ ಸೇವಕರೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳೂ ಗತ್ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರೂ ಅರಸನ ಮುಂದೆ ಹೋದರು.


ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನು ಹತ್ತಿ ಓಡಿಹೋದರು.


ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರಕೊಂಡು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೆರೂಸಲೇವಿುನಿಂದ ಹೊರಟನು.


ಆಗ ಅವನು - ರಾಜ್ಯವು ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಾಯೇಲ್ಯರೆಲ್ಲರೂ ಎದುರು ನೋಡುತ್ತಿದ್ದರೆಂದು ನೀನು ಬಲ್ಲೆಯಷ್ಟೆ; ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು