Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:40 - ಕನ್ನಡ ಸತ್ಯವೇದವು J.V. (BSI)

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ ಬಹುಸಂತೋಷದಿಂದ ಆರ್ಭಟಿಸುತ್ತಾ ತಿರಿಗಿ ಬಂದರು. ಅವರ ಕೂಗಿನಿಂದ ಭೂವಿುಯು ಸೀಳಿಹೋಗುತ್ತದೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತರುವಾಯ ಅವರೆಲ್ಲರು ಅವನನ್ನು ಹಿಂಬಾಲಿಸಿ, ಕೊಳಲೂದುತ್ತಾ ಹರ್ಷಾನಂದದಿಂದ ಆರ್ಭಟಿಸುತ್ತಾ, ಹಿಂದಿರುಗಿ ಬಂದರು. ಅವರ ಜಯಕಾರದ ಕೂಗು ಭೂಮಿಯನ್ನೇ ನಡುಗಿಸುವಂತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:40
13 ತಿಳಿವುಗಳ ಹೋಲಿಕೆ  

ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲಿ ಕತ್ತಿಯಿಂದ ಸಂಹರಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ


ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು