Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:8 - ಕನ್ನಡ ಸತ್ಯವೇದವು J.V. (BSI)

8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:8
17 ತಿಳಿವುಗಳ ಹೋಲಿಕೆ  

ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.


ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ - ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ ಎಂದು ಆಜ್ಞಾಪಿಸಿದನು;


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು