Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:2 - ಕನ್ನಡ ಸತ್ಯವೇದವು J.V. (BSI)

2 ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:2
15 ತಿಳಿವುಗಳ ಹೋಲಿಕೆ  

ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.


ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಹೋದನು.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವದೋ? ಮಾತಾಡದೆ ಸುಮ್ಮನೆ ಇರುವದಕ್ಕೆ ಯಾರಿಂದಾದೀತು?


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಲಿನ ಮುಂದೆ ನಿಂತನು.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.


ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ


ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಾದ ಅವನಿಗೆ ತಿಳಿಯದಂಥದು ಅವುಗಳಲ್ಲಿ ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರ ಕೊಟ್ಟನು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು