Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:24 - ಕನ್ನಡ ಸತ್ಯವೇದವು J.V. (BSI)

24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:24
13 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವಿಕೆಯ ಹೆಸರುವಾಸಿಯು ಜನಾಂಗಗಳಲ್ಲಿ ಹಬ್ಬಿತು; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು