Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:32 - ಕನ್ನಡ ಸತ್ಯವೇದವು J.V. (BSI)

32 ತನ್ನ ಸೇವಕನಾದ ದಾವೀದನ ನಿವಿುತ್ತವಾಗಿಯೂ ತಾನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದ ನಿವಿುತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:32
6 ತಿಳಿವುಗಳ ಹೋಲಿಕೆ  

ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಅವರು ಈ ಪ್ರಕಾರ ನಡೆದದರಿಂದ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಯೆಹೂದಕುಲದವರ ಹೊರತು ಉಳಿದ ಎಲ್ಲಾ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವದಿಲ್ಲ.


ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು