Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:16 - ಕನ್ನಡ ಸತ್ಯವೇದವು J.V. (BSI)

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:16
32 ತಿಳಿವುಗಳ ಹೋಲಿಕೆ  

ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ತಿಳಿದು ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ದಾವೀದನ ಸಂತಾನದವರನ್ನು ಅವರ ಪಾಪದ ದೆಸೆಯಿಂದ ಕುಗ್ಗಿಸುವೆನು; ಆದರೆ ಸದಾಕಾಲವು ಅಲ್ಲ ಎಂದು ಹೇಳಿದ್ದಾನೆ ಅಂದನು.


ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿವಿುತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು.


ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ಆದರೆ ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;


ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು