Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:25 - ಕನ್ನಡ ಸತ್ಯವೇದವು J.V. (BSI)

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:25
15 ತಿಳಿವುಗಳ ಹೋಲಿಕೆ  

ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು.


ಸೊಲೊಮೋನನ ಬಿಟ್ಟೀಕೆಲಸದವರು ಕಟ್ಟಿದವುಗಳು ಯಾವವಂದರೆ - ಯೆಹೋವನ ಆಲಯ, ಅರಮನೆ, ವಿುಲ್ಲೋಕೋಟೆ, ಯೆರೂಸಲೇವಿುನ ಪೌಳಿಗೋಡೆ, ಹಾಚೋರ್, ಮೆಗಿದ್ದೋ, ಗೆಜೆರ್ ಇವೇ.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಅವನು ತನ್ನ ಮನಸ್ಸಿನಲ್ಲಿ - ರಾಜ್ಯವು ತಿರಿಗಿ ದಾವೀದನ ಕುಟುಂಬದವರಿಗೆ ಆಗುವದೋ ಏನೋ;


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು