Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:5 - ಕನ್ನಡ ಸತ್ಯವೇದವು J.V. (BSI)

5 ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.


ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು