Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:9 - ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:9
42 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ಇವನು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನೂ ಆಗಿದ್ದನು.


ಇವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು