Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:14 - ಕನ್ನಡ ಸತ್ಯವೇದವು J.V. (BSI)

14 ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:14
14 ತಿಳಿವುಗಳ ಹೋಲಿಕೆ  

ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು.


ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಆತನ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಕೊಳ್ಳಿರಿ ಎಂಬದೇ.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.


ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು