Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:20 - ಕನ್ನಡ ಸತ್ಯವೇದವು J.V. (BSI)

20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:20
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದವನ ಹೆಸರು.


ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.


ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು