Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:22 - ಕನ್ನಡ ಸತ್ಯವೇದವು J.V. (BSI)

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ವಿುಚ್ಬೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು ಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:22
11 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದಿಂದ ಗಿಬ್ಯೋನ್, ಗೆಬ,


ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,


ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.


ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡುಹೋಗಿ ಗೆಬ, ವಿುಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು


ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿಬಿಟ್ಟನು.


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು