Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:20 - ಕನ್ನಡ ಸತ್ಯವೇದವು J.V. (BSI)

20 ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:20
19 ತಿಳಿವುಗಳ ಹೋಲಿಕೆ  

ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಆಕೆಯ ಉಡಿಲಿನಿಂದ ತೆಗೆದುಕೊಂಡು ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. ಅನಂತರ ಅವನು ಯೆಹೋವನಿಗೆ -


ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು.


ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು.


ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.


ಇಲ್ಲಿಂದ ಅಲ್ಲಿಗೆ ಹೋಗು ಎಂದು ಹೇಳಿದರೂ ಅದು ಹೋಗುವದು; ಮತ್ತು ನಿಮ್ಮ ಕೈಯಿಂದಾಗದಂಥದು ಒಂದೂ ಇರುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು