Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:22 - ಕನ್ನಡ ಸತ್ಯವೇದವು J.V. (BSI)

22 ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:22
13 ತಿಳಿವುಗಳ ಹೋಲಿಕೆ  

ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅವನು ದೇವರ ಮುಂದೆ - ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದುಹಾಕಿದ್ದಾರೆ, ನಾನೊಬ್ಬನೇ ಉಳಿದಿದ್ದೇನೆ, ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ


ಆಗ ಇವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತು


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ನನಗೆ ಜೀವದಾನಮಾಡಬೇಕೆಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ ಅಂದರು. ಆಗ ಅವನು - ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು ಎಂದು ಉತ್ತರಕೊಟ್ಟನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು