Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:43 - ಕನ್ನಡ ಸತ್ಯವೇದವು J.V. (BSI)

43 ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:43
11 ತಿಳಿವುಗಳ ಹೋಲಿಕೆ  

ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು.


ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಏಳನೆಯ ಸಾರಿ ಸೇವಕನು - ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ - ನೀನು ಹೋಗಿ ಅಹಾಬನಿಗೆ - ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರಿಗಿ ಅವನ ಮೇಲೆ ಬೋರ್ಲ ಬೀಳಲು ಹುಡುಗನು ಏಳು ಸಾರಿ ಸೀತು ಕಣ್ದೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು