Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:11 - ಕನ್ನಡ ಸತ್ಯವೇದವು J.V. (BSI)

11 ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:11
31 ತಿಳಿವುಗಳ ಹೋಲಿಕೆ  

ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -


ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ.


ನನಗೆ ಅಪ್ಪಣೆಯಾದಂತೆ ನಾನು ಆ ದೈವೋಕ್ತಿಯನ್ನೆತ್ತಿ ನುಡಿಯುತ್ತಿರಲು ಸದ್ದಾಯಿತು, ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ ಜೋಡನೆಯಾದವು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ಬೆಳಿಗ್ಗೆ ನೀನು ಸಿದ್ಧವಾಗಿದ್ದು ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು