Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:19 - ಕನ್ನಡ ಸತ್ಯವೇದವು J.V. (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:19
14 ತಿಳಿವುಗಳ ಹೋಲಿಕೆ  

ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.


ಅವನು ತಿರಿಗಿ - ಅವನ ರೂಪ ಹೇಗಿದೆ ಎಂದು ಕೇಳಲು ಆಕೆಯು - ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕನು ಬರುತ್ತಾನೆ ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.


ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು


ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;


ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು - ಜನರು ಗೋಳಾಡುವದಕ್ಕೇನು ಕಾರಣವೆಂದು ಕೇಳಲು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು