Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:42 - ಕನ್ನಡ ಸತ್ಯವೇದವು J.V. (BSI)

42 ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:42
11 ತಿಳಿವುಗಳ ಹೋಲಿಕೆ  

ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.


ಹಜಾಯೇಲನು ಅವನನ್ನು - ನನ್ನ ಒಡೆಯಾ, ಯಾಕೆ ಅಳುತ್ತೀ ಎಂದು ಕೇಳಿದನು. ಅದಕ್ಕೆ ಅವನು - ನೀನು ಇಸ್ರಾಯೇಲ್ಯರಿಗೆ ಎಷ್ಟು ಕೇಡು ಮಾಡುವಿಯೆಂಬದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ ಎಂದು ಉತ್ತರ ಕೊಟ್ಟನು.


ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.


ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.


ನೀನು ಯೆಹೋವನ ಮಾತನ್ನು ಕೇಳಲಿಲ್ಲ; ಆತನು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದದರಿಂದಲೇ ಯೆಹೋವನು ಈಗ ನಿನಗೆ ಹೀಗೆ ಮಾಡುತ್ತಾನೆ.


ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು.


ಕೇವಲ ಯೆಹೋವನ ಸೊತ್ತಾಗುವದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವದಕ್ಕಾಗದು; ಅವನಿಗೆ ಮರಣವೇ ಆಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು