Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:7 - ಕನ್ನಡ ಸತ್ಯವೇದವು J.V. (BSI)

7 ಆಗ ಇಸ್ರಾಯೇಲ್ಯರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರಿಸಿ ಅವರಿಗೆ - ನೋಡಿದಿರಾ, ಅವನು ನಮಗೆ ಕೇಡು ಬಗೆಯುತ್ತಾನೆ; ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು ಎಂದು ಅವನು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:7
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವದು.


ಧರ್ಮಕ್ಕೆ ಆತುರಪಡುವವನಿಗೆ ದಯೆ; ಕೇಡನ್ನು ಹುಡುಕುವವನಿಗೆ ಕೇಡೇ.


ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.


ಅವರು ಕೇಡು ಕಲ್ಪಿಸುತ್ತಾರೆ; ಯಾವಾಗಲೂ ಜಗಳವೆಬ್ಬಿಸುತ್ತಾರೆ.


ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು ಅವನು ಬಾಗಿದ ಗೋಡೆಯೋ ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವದು ಇನ್ನೆಷ್ಟರವರೆಗೆ?


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.


ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ಕಲ್ಪಿಸುವದು ಮೋಸವೇ.


ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ದಾವೀದನು ಸಹಸ್ರಾಧಿಪತಿ ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಮಾತಾಡಿದನಂತರ


ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.


ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬದಾಗಿ ಬೆನ್ಹದದನು ಅನ್ನುತ್ತಾನೆ ಎಂದು ತಿಳಿಸಿದರು.


ಎಲ್ಲಾ ಹಿರಿಯರೂ ಜನರೂ ಅವನಿಗೆ - ನೀನು ಈ ಮಾತಿಗೆ ಒಪ್ಪಬೇಡ ಅಂದರು.


ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು