Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:19 - ಕನ್ನಡ ಸತ್ಯವೇದವು J.V. (BSI)

19 ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:19
23 ತಿಳಿವುಗಳ ಹೋಲಿಕೆ  

ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು; ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟಿ ಊರನ್ನು ಅನ್ಯಾಯದಿಂದ ಸ್ಥಾಪಿಸುವವನ ಗತಿಯನ್ನು ಏನು ಹೇಳಲಿ!


ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು


ಇಗೋ ಯೆಹೋವನು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವವೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೆ ಎಂದು ಹೇಳಿದನು.


ನಾನು ಹಣಕೊಡದೆ ಅದರ ಸಾರವನ್ನನುಭವಿಸಿ ಅದರ ದಣಿಗಳ ಪ್ರಾಣ ಹೋದದ್ದಕ್ಕೆ ಕಾರಣನಾಗಿದ್ದರೆ


ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವದು ಎಂದು ನುಡಿದನು.


ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.


ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇವಿುನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು