Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:28 - ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:28
25 ತಿಳಿವುಗಳ ಹೋಲಿಕೆ  

ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು -


ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ಕೂಡಲೆ ಅರಸನು - ಬದುಕಿರುವ ಕೂಸನ್ನು ಕೊಲ್ಲಬೇಡಿರಿ, ಆ ಸ್ತ್ರೀಗೆ ಕೊಡಿರಿ; ಅವಳೇ ಅದರ ತಾಯಿ ಎಂದು ಆಜ್ಞಾಪಿಸಿದನು.


ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು.


ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು