Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:13 - ಕನ್ನಡ ಸತ್ಯವೇದವು J.V. (BSI)

13 ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:13
14 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.


ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ


ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಶಾಫಾಟನ ಮಗನೂ ಆದ ಯೆಹುವು ಯೋರಾಮನಿಗೆ ವಿರೋಧವಾಗಿ ಒಳಸಂಚುಮಾಡಿದನು. (ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರ ಸಹಿತವಾಗಿ ಹೋಗಿ ಹಜಾಯೇಲನೊಡನೆ


ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.


ಗಾದ್ಯರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾಗಿರುವ ಗಿಲ್ಯಾದಿನ ರಾಮೋತ್,


ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.


ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.


ಆ ಕಾಲದಲ್ಲಿ ನಾವು ಅರ್ನೋನ್ ಹೊಳೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಯೊರ್ದನ್ ಹೊಳೆಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.


ಗೆಷೂರ್ಯರೂ ಅರಾಮ್ಯರೂ ಯಾಯೀರನ ಸಂತಾನದವರಿಂದ ಯಾಯೀರನ ಗ್ರಾಮಗಳನ್ನೂ ಕೆನತ್ ಪ್ರಾಂತದ ಗ್ರಾಮಗಳನ್ನೂ ಒಟ್ಟು ಅರುವತ್ತು ಸ್ಥಾನಗಳನ್ನು ಕಿತ್ತುಕೊಂಡರು. ಈ ಸ್ಥಾನಗಳವರೆಲ್ಲರೂ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಗೋತ್ರದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು